ಕುಶಾಲನಗರದಲ್ಲಿ ಸಂಭ್ರಮದಿಂದ ಓಣಂ ಆಚರಣೆ
[Updated 17/09/2012 12:02 pm]ಕುಶಾಲನಗರ, ಸೆ.17: ಸ್ಥಳೀಯ ಕೇರಳ ಸಮಾಜ ಮತ್ತು ಓಣಂ ಹಬ್ಬ ಅಚರಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಮಲಯಾಳಿ ಭಾಷೆಯನ್ನಾಡುವ ಹಿಂದೂ, ಮುಸ್ಲಿಂ, ಕ್ರೈಸ್ತರು ಒಟ್ಟಿಗೆ ಸೇರಿ ಕೇರಳದ ನಾಡಹಬ್ಬ ಭಾವೈಕ್ಯತೆಯ ಪ್ರತೀಕವಾದ ಓಣಂ ಹಬ್ಬವನ್ನು ವೈಶಿಷ್ಟ್ಯವಾಗಿ ಆಚರಿಸಿ ಸಂಭ್ರಮಿಸಿದರು. ಸಮಾಜದ ಬಾಂಧವರು ಸಾಂಪ್ರ್ರದಾಯಿಕ ಉಡುಗೆ ತೊಡುಗೆ ಧರಿಸುವ ಮೂಲಕ ನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸಿದರು. ಕಾರ್ಯಕ್ರಮ ವೇದಿಕೆಯ ಪ್ರವೇಶ ದ್ವಾರದಿಂದ ನಡೆದ ವರ್ಣರಂಜಿತ ಮೆರವಣಿಗೆಯಲ್ಲಿ ಬಲಿಚಕ್ರವರ್ತಿಯ ವೇಷಧಾರಿ ಆಕರ್ಷಕವಾಗಿತ್ತು.
ಇಲ್ಲಿನ ಕನ್ನಿಕಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆದ ಹಬ್ಬದ ವೇದಿಕೆ ಕಾರ್ಯಕ್ರಮದಲ್ಲಿ ಕೇರಳ ಸಮಾಜದ ಅಧ್ಯಕ್ಷರು ಕೆ.ಆರ್.ಶಿವಾನಂದನ್ ಮಾತನಾಡಿ, ಮಲಯಾಳಿ ಭಾಷಿಕರು ಸಂಘಟಿತರಾಗುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಕೇರಳ ಸಮಾಜದ ಹಿರಿಯ ಮುಖಂಡ ವಿಜಯನ್ ಮಾತನಾಡಿ, ಹಿಂದೂ, ಮುಸ್ಲಿಂ, ಕ್ರೈಸ್ತರು ಒಟ್ಟಿಗೆ ಸೇರಿ ಅಚರಿಸುವ ಓಣಂ ಹಬ್ಬ ಭಾವೈಕ್ಯತೆಯ ಪ್ರತೀಕವಾಗಿದೆ ಎಂದರು. ಮಲಯಾಳಿ ಭಾಷಿಕರು ಇತರ ಭಾಷೆಯ ಜನಾಂಗದವರೊಂದಿಗೆ ಪ್ರೀತಿ, ವಿಶ್ವಾಸ ಹಾಗೂ ಸಹಬಾಳ್ವೆ ಯಿಂದ ಜೀವನ ನಡೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಕರೆ ನೀಡಿದರು.



ಓಣಂ ಆಚರಣಾ ಸಮಿತಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಮಲಯಾಳಿ ಭಾಷಿಕರು ಸಂಘಟಿತರಾಗುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಸಮಾಜದ ಕಾರ್ಯದರ್ಶಿ ಪಿ.ಟಿ.ಸುದೇಶ್ ಕುಮಾರ್, ಖಜಾಂಜಿ ಎಂ.ಆರ್.ಬಾಲಕೃಷ್ಣ, ನಿರ್ದೇಶಕರಾದ ಐ.ಡಿ.ರಾಯ್, ಅಜಿತ್ ರಾಜ್, ಎಂ.ಎಸ್.ಶಾಂತಿ, ಜಿ.ಸಿ.ಗೋಪಾಲಕೃಷ್ಣ, ಸಲಹೆಗಾರಾದ ಭಾಸ್ಕರ್, ಯು.ಎಸ್.ಲಕ್ಷ್ಮಣ, ಸುದೇಶ್ ಮತ್ತಿತರರು ಉಪಸ್ಥಿತರಿದ್ದರು. ಓಣಂ ಹಬ್ಬದ ಅಂಗವಾಗಿ ಹೂವಿನ ರಂಗೋಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ನೃತ್ಯ, ಸುಗಮ ಸಂಗೀತ, ಭರತನಾಟ್ಯ, ಛದ್ಮವೇಷ, ತಿರುವಾದಿರ ಕಳಿ, ಸಿನೆಮಾಟಿಕ್ ಡ್ಯಾನ್ಸ್ ಏರ್ಪಡಿಸಲಾಗಿತ್ತು.
ಹಬ್ಬದ ಅಂಗವಾಗಿ ಮಕ್ಕಳು ಮತ್ತು ಮಹಿಳೆಯರಿಗೆ ಏರ್ಪಡಿಸಿದ್ದ ಪುಷ್ಪ ರಂಗವಲ್ಲಿ ಸ್ಪರ್ಧೆಯಲ್ಲಿ ಬಿಡಿಸಲಾಗಿದ್ದ ಬಣ್ಣ ಬಣ್ಣ ಪುಷ್ಪರಂಗೋಲಿ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಏರ್ಪಡಿಸಿದ್ದ ಓಣಂ ಸದ್ಯ ಎಂಬ ವೈಶಿಷ್ಟ್ಯ ಭೋಜನವನ್ನು ಎಲ್ಲರೂ ಒಟ್ಟಿಗೆ ಸವಿದರು. ಮಧ್ಯಾಹ್ನದ ನಂತರ ಮಕ್ಕಳಿಗೆ ಭರತನಾಟ್ಯ, ನಾಡೋಡಿ ನೃತ್ಯ, ಛದ್ಮವೇಷ ಮತ್ತಿತರ ಸಾಂಸ್ಕೃತಿಕ ಸ್ಪರ್ಧೆಗಳನ್ನು ನಡೆಸಲಾಯಿತು. ಇದೇ ಸಂದರ್ಭ ಸಮಾಜದ ವತಿಯಿಂದ ಸಮಾಜಕ್ಕೆ ಸೇರಿದ ಕುಟುಂಬದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಯಿತು.
Grand Onam celebrates at Kushalnagar
Kushalnagar: Onam was celebrated with gaiety with ll fervour by Keralites residing in Kushalnagar on Sunday. The function was held under the aegis of Kerala Samajam and Onam Festival Celebration Committee.
ಬರಿದಾದ ಕೆಆರ್ ಎಸ್ ನೋಡಲು ಮುಗಿ ಬಿದ್ದ ಜನ
ಮೈಸೂರು: ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆಯೇ ಮುಳುಗಡೆಯಾಗಿದ್ದ ಗ್ರಾಮಗಳು, ದೇವಾಲಯಗಳು ಎದ್ದು ಕಾಣತೊಡಗಿವೆ.
ಬಿಎಸ್ ವೈ ಮಾರ್ಗದಲ್ಲಿ ಸಿದ್ದು: ಹೆಚ್ ಡಿಕೆ ವ್ಯಂಗ್ಯ
ಪಿರಿಯಾಪಟ್ಟಣ: ಕಾಂಗ್ರೆಸ್ ನಲ್ಲಿಯೂ ಅಧಿಕಾರಕ್ಕಾಗಿ ಆಂತರಿಕ ಕಿತ್ತಾಟ ಆರಂಭವಾಗಿದ್ದು, ಸಿದ್ದರಾಮಯ್ಯ ಕೂಡ ಯಡಿಯೂರಪ್ಪನವರ ಮಾರ್ಗದಲ್ಲಿ ಸಾಗುವ ಲಕ್ಷಣಗಳು ಕಂಡು ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ವೆಲ್ಡಿಂಗ್ ಯಡವಟ್ಟು: ವ್ಯಾನ್ ಗೆ ಬೆಂಕಿ
ಮೈಸೂರು: ವೆಲ್ಡಿಂಗ್ ಮಾಡುತ್ತಿದ್ದ ಸಂದರ್ಭ ಆಕಸ್ಮಿಕ ಬೆಂಕಿ ತಗುಲಿ ಮಾರುತಿ ವ್ಯಾನ್ ಭಸ್ಮಗೊಂಡಿರುವ ಘಟನೆ ನಗರದ ಕುಂಬಾರಗೇರಿಯಲ್ಲಿ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತನ್ವೀರ್ ಗೆ ದಕ್ಕದ ಸ್ಥಾನ: ಆತ್ಮಹತ್ಯೆಗೆ ಯತ್ನ
ಮೈಸೂರು: ಅತ್ತ ಬೆಂಗಳೂರಿನಲ್ಲಿ ನೂತನ ಸಚಿವ ಸಂಪುಟದ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಇತ್ತ ಸಚಿವ ಸ್ಥಾನ ದಕ್ಕದ ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್...
ಸಂಭ್ರಮ ಮೂಡಿಸಿದ ಪುಟ್ಬಾಲ್ ಪಂದ್ಯಾಟ
ವಿರಾಜಪೇಟೆ: ವಿರಾಜಪೇಟೆ ಸಂತ ಅನ್ನಮ್ಮ ಕ್ರೈಸ್ತ ಸ್ನೇಹಿತರ ಸಂಘದ ಆಶ್ರಯದಲ್ಲಿ ಸಂತ ಅನ್ನಮ್ಮ ಕಾಲೇಜು ಮೈದಾನದಲ್ಲಿ ನಡೆದ ಪ್ರಥಮ ವರ್ಷದ ಪುಟ್ಬಾಲ್ ಪಂದ್ಯಾಟವು ಕ್ರೈಸ್ತ ಸಮುದಾಯಗಳ ನಡುವೆ ಸಂಭ್ರಮವನ್ನುಂಟು ಮಾಡಿತು.
ವಿದ್ಯುತ್ ಉತ್ಪಾದಿಸಿ ಕಬ್ಬು ಅರೆಯುವ ಸಕ್ಕರೆ ಕಾರ್ಖಾನೆ
ಕೃಷ್ಣರಾಜಪೇಟೆ: ರೈತರು ವಿದ್ಯುತ್ ಅಭಾವವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಮಾಕವಳ್ಳಿಯಲ್ಲಿರುವ ಕೋರಮಂಡಲ್ ಸಕ್ಕರೆ ಕಾರ್ಖಾನೆ ಕೋಜನರೇಷನ್ ಮೂಲಕ 12 ಮೆಗಾವ್ಯಾಟ್ ವಿದ್ಯುಚ್ಛಕ್ತಿಯನ್ನು ಉತ್ಪಾದನೆ ಮಾಡಿ ರೈತರ ಕಬ್ಬು ಅರಿಯುತ್ತಿದೆ...
ಹುಣಸೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ
ಹುಣಸೂರು: ಬಡತನ, ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ಆಮಿಷವೊಡ್ಡಿ ಗಿರಿಜನರ ಬದುಕನ್ನು ಹಾಳುಗೆಡವುತ್ತಿರುವ ಮತಾಂಧಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಹುಣಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅಪಾಯದ ಅಂಚಿನಲ್ಲಿ ಕೃಷಿ ಕ್ಷೇತ್ರ
ಮಂಡ್ಯ: ಯುವಶಕ್ತಿ ಕೃಷಿಯತ್ತ ನಿರಾಸಕ್ತಿ ತೋರುತ್ತಿರುವುದರಿಂದ ಕೃಷಿ ಕ್ಷೇತ್ರ ಅಪಾಯದ ಅಂಚಿನಲ್ಲಿದೆ ಎಂದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಸಂಪರ್ಕ ಅಧಿಕಾರಿ, ಪ್ರಗತಿಪರ ಚಿಂತಕ ಡಾ.ಕೆ. ಪುಟ್ಟಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಕ್ರೀಡಾಪಟುಗಳಿಗೆ ಇಚ್ಛಾಶಕ್ತಿ ಬೇಕು: ಶಾಸಕ ರಂಜನ್
ಸೋಮವಾರಪೇಟೆ: ಕ್ರೀಡಾಪಟುಗಳಲ್ಲಿ ಶ್ರದ್ಧೆ ಮತ್ತು ಇಚ್ಛಾಶಕ್ತಿಯಿದ್ದರೆ ಮಾತ್ರ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟರು.
ಯಳಂದೂರಿನಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ
ಯಳಂದೂರು: ಪಟ್ಟಣದಲ್ಲಿ ಕೇಂದ್ರದ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ನೀಡದಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ಕಾಂಗ್ರೆಸ್ ದಲಿತ ವಿರೋಧಿ ನೀತಿ ಖಂಡಿಸಿ ತಾಲ್ಲೂಕು ದಲಿತ...
29ರಿಂದ ವಿಧಾನ ಮಂಡಲ ಅಧಿವೇಶನ
ಬೆಂಗಳೂರು: ಮೇ 29 ರಿಂದ ವಿಧಾನ ಮಂಡಲದ ಅಧಿವೇಶನವನ್ನು ನಡೆಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 31 ರಂದು ಸ್ಪೀಕರ್ ಸ್ಥಾನಕ್ಕೆ...
ಭ್ರಷ್ಟಾಚಾರಕ್ಕೆ ಅವಕಾಶ ನೀಡದಂತೆ ಸಚಿವರಿಗೆ ಸಿಎಂ ಕರೆ
ಬೆಂಗಳೂರು: ಭ್ರಷ್ಟಾಚಾರ ನಡೆಸಿದ ಸರ್ಕಾರವನ್ನು ಹೊರಗಿಟ್ಟು ಕಾಂಗ್ರೆಸ್ ಗೆ ಜನ ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಶ್ರೀಶಾಂತ್ ಹೋಟೆಲ್ ರೂಮ್ ಗೆ ಪೊಲೀಸ್ ದಾಳಿ
ಮುಂಬಯಿ: ಮುಂಬಯಿ ಪೊಲೀಸರು ಶನಿವಾರ ಪಂಚತಾರಾ ಹೋಟೆಲ್ ಒಂದರ ಮೇಲೆ ದಾಳಿ ಮಾಡಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ಬಂಧಿತನಾಗಿರುವ ರಾಜಸ್ಥಾನ ರಾಯಲ್ಸ್ ನ ಆಟಗಾರ ಎಸ್. ಶ್ರೀಶಾಂತ್ ಗೆ ಸಂಬಂಧಪಟ್ಟ ಲ್ಯಾಪ್ ಟಾಪ್
ಖಾದರ್, ರೈ, ಜೈನ್, ಸೊರಕೆ ಸಹಿತ ಸಚಿವರ ಪ್ರಮಾಣವಚನ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರುಗಳು ಶನಿವಾರ ರಾಜ್ಯಪಾಲರ ಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ನೂತನ ಸಚಿವರ ಪ್ರಮಾಣ ವಚನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಇಂದು ಅಸ್ಥಿತ್ವಕ್ಕೆ ಬರಲಿದ್ದು, ಬೆಳಿಗ್ಗೆ 10.30ಕ್ಕೆ ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ 29 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸ್ಪಾಟ್ ಫಿಕ್ಸಿಂಗ್: ಕರ್ನಾಟಕದ ಅಮಿತ್ ಸಿಂಗ್ ಸೆರೆ
ಹೊಸದಿಲ್ಲಿ: ಐಪಿಎಲ್ ನಲ್ಲಿ ತಲ್ಲಣವನ್ನು ಉಂಟು ಮಾಡಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಬುಕ್ಕಿಗಳು ಮತ್ತು ಆಟಗಾರರ ಮಧ್ಯವರ್ತಿಯಾಗಿದ್ದ ರಾಜಸ್ಥಾನ ರಾಯಲ್ಸ್ ನ ಮಾಜಿ ವೇಗಿ ಅಮಿತ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.
ನಾನು ನಿರ್ದೋಷಿ, ಹಗರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ: ಶ್ರೀಶಾಂತ್
ಹೊಸದಿಲ್ಲಿ: ಐಪಿಎಲ್ ನಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಸಿಲುಕಿರುವ ವೇಗಿ ಶ್ರೀಶಾಂತ್, ತಾನು ನಿರ್ದೋಷಿ ಮತ್ತು ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ದೆಹಲಿ ಕೋರ್ಟ್ ಮುಂದೆ ಹೇಳಿದರು.
ಲಾಕೆಟ್, ಕರ್ಚಿಫ್ ಸ್ಪಾಟ್ ಫಿಕ್ಸಿಂಗ್ ಸಂಕೇತಗಳು!
ನವದೆಹಲಿ: ಐಪಿಎಲ್ ನಲ್ಲಿ ಸ್ಫಾಟ್ ಫಿಕ್ಸಿಂಗ್ ನಲ್ಲಿ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ರಾಜಸ್ಥಾನ ರಾಯಲ್ಸ್ ತಂಡದ ಎಸ್. ಶ್ರೀಶಾಂತ್, ಅಜಿತ್ ಚಾಂಡಿಲಾ ಮತ್ತು ಅಂಕಿತ್ ಚೌವ್ಹಾಣ್ ಬುಕ್ಕಿಗಳಿಗೆ ನಿರ್ದೇಶನ ನೀಡಲು ವಿವಿಧ
ನಾಳೆ ಸಚಿವರ ಪ್ರಮಾಣ ವಚನ?
ಬೆಂಗಳೂರು: ಸಚಿವ ಸಂಪುಟಕ್ಕೆ 22 ಸಚಿವರನ್ನು ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ಸೂಚಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಮೊದಲ ಮಹಿಳಾ ಯೋಧೆ ಸಂಶಯಾಸ್ಪದ ಸಾವು
ನವದೆಹಲಿ: ಭಾರತೀಯ ಸೇನೆಯ ಮೊದಲ ಮಹಿಳಾ ಯೋಧೆ ಶಾಂತಿ ತಿಗ್ಗಾ(37) ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಈ ಬಗ್ಗೆ ಹಲವಾರು ಸಂಶಯಗಳು ಕಾಡಲಾರಂಭಿಸಿದೆ.
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.
ಅಮ್ಮಾ ಜಸ್ಟ್ ಫ್ರೆಂಡ್ ಅಲ್ಲ, ಬೆಸ್ಟ್ ಫ್ರೆಂಡ್!
ಅಮ್ಮಾ ನಿನ್ನ ತೋಳಿನಲ್ಲಿ ಕಂದ ನಾನು... ನಿನ್ನಾ ಸಂಗ ಆಡಲೆಂದು ಬಂದೆ ನಾನು... ಪದ್ಯದ ಸಾಲುಗಳಲ್ಲಿ ಅಮ್ಮಾ... ಅನ್ನೋ ಪದವನ್ನು ಕೇಳಿದಾಗ ಹೆತ್ತು, ಹೊತ್ತು, ಸಾಕಿ ಸಲಹಿದ ಅಮ್ಮನನ್ನು ನೆನೆಸಿಕೊಳ್ಳದವರು ಇರಲಿಕ್ಕಿಲ್ಲ.
ಕೊಡಗಿನಲ್ಲಿ ಕಂಡ ಕಂಡವರನ್ನು ಬೈಯ್ಯೋ ಹಬ್ಬ...
ಇದೊಂದು ವಿಚಿತ್ರವಾದರೂ ವಿಶಿಷ್ಟ ಹಬ್ಬ. ಬಹುಶಃ ಇಂತಹವೊಂದು ಹಬ್ಬವನ್ನು ಕೊಡಗು ಹೊರತುಪಡಿಸಿದರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಇಷ್ಟಕ್ಕೂ ಇದ್ಯಾವುದಪ್ಪಾ ಅಂತಹ ವಿಚಿತ್ರಹಬ್ಬ ಎಂಬ ಕುತೂಹಲ ಪ್ರತಿಯೊಬ್ಬರನ್ನು ಕಾಡದಿರದು.
ಸ್ಯಾಂಡಲ್ ವುಡ್ ನಲ್ಲಿ ಮತ್ತೊಬ್ಬ ಸರ್ಜಾ
ಕನ್ನಡದವರೇ ಆಗಿರುವ ತಮಿಳು, ತೆಲುಗು ಚಿತ್ರರಂಗದಲ್ಲಿ ವಿಶೇಷವಾಗಿ ಹೆಸರು ಮಾಡಿರುವ, ಬಹುಮುಖ್ಯವಾಗಿ ಈ ವರ್ಷ ಕನ್ನಡದ ಪ್ರಸಾದ್ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಈ ವರ್ಷದ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನು...
ಬನ್ನಿ ಬಿಳಿಗಿರಿರಂಗನ ಬೆಟ್ಟಕ್ಕೆ...... ನಿಸರ್ಗದ ಸ್ವರ್ಗಕ್ಕೆ......
ಚಾಮರಾಜನಗರ ಜಿಲ್ಲೆಯ ಪ್ರವಾಸಿ ತಾಣಗಳಲ್ಲೊಂದಾದ ಬಿಳಿಗಿರಿರಂಗನ ಬೆಟ್ಟವು ಮೈಸೂರಿನಿಂದ ಸುಮಾರು ತೊಂಬತ್ತು ಕಿ.ಮೀ. ಹಾಗೂ ಚಾಮರಾಜನಗರ ಜಿಲ್ಲೆಯ ಯಳಂದೂರಿನಿಂದ ಸುಮಾರು 15ಕಿಮೀ ದೂರದಲ್ಲಿದೆ.

Write Your Comment Here...