ಬಿಜೆಪಿ, ಕಾಂಗ್ರೆಸ್ ನ ಯಾವ ಶಾಸಕನೂ ನನ್ನ ಸಂಪರ್ಕದಲ್ಲಿಲ್ಲ
[Updated 16/07/2012 04:56 pm]ಬೆಂಗಳೂರು: ಕಾಂಗ್ರೆಸ್ ಅಥವಾ ಬಿಜೆಪಿಯ ಯಾವ ಶಾಸಕರು, ಮುಖಂಡರು ನನ್ನೊಂದಿಗೆ ಮಾತನಾಡಿಲ್ಲ, ನನ್ನ ಸಂಪರ್ಕದಲ್ಲೂ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟಪಡಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಬೇರೆ ಬೇರೆ ಕಾರಣಕ್ಕೆ ಅತೃಪ್ತಿಗೊಂಡಿರುವ ಕೆಲ ಶಾಸಕರು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಈ ಮೇಲಿನಂತೆ ಉತ್ತರ ನೀಡಿದರು.
ಶ್ರೀನಿವಾಸಶೆಟ್ಟಿ ಸಜ್ಜನ, ಪ್ರಾಮಾಣಿಕ. ಅವರಿಗೆ ಸಚಿವ ಸ್ಥಾನ ದೊರಕಬೇಕಾಗಿತ್ತು. ಆದರೆ, ಕಾರಣಾಂತರಗಳಿಂದ ಸಿಕ್ಕಿಲ್ಲ. ಇದು ಆ ಪಕ್ಷದ ಆಂತರಿಕ ವಿಚಾರ. ನಾನು ಇದರ ಬಗ್ಗೆ ತಲೆ ಹಾಕುವುದಿಲ್ಲ. ಕಾಂಗ್ರೆಸ್ ಅಥವಾ ಬಿಜೆಪಿಯ ಯಾವುದೇ ಶಾಸಕರು, ಮುಖಂಡರು ನನ್ನ ಸಂಪರ್ಕದಲ್ಲಿಲ್ಲ ಎಂದರು.
ಈ ಹಿಂದೆ ಅಡ್ವಾಣಿ ಪಾಕಿಸ್ತಾನಕ್ಕೆ ಭೇಟಿ ಕೊಟ್ಟು ಜಿನ್ನಾ ಅವರನ್ನು ನಿಜವಾದ ಜಾತ್ಯತೀತ ನಾಯಕ ಎಂದು ಬಣ್ಣಿಸಿದಾಗ, ದೊಡ್ಡ ಮಟ್ಟದಲ್ಲಿ ಅವರ ವಿರುದ್ಧ ಕೂಗು ಎಬ್ಬಿಸಲಾಯಿತು. ಆದರೆ, ಇತ್ತೀಚೆಗೆ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳಿಂದ ಆರ್ ಎಸ್ಎಸ್ ನಾಯಕರು ನೊಂದಿದ್ದಾರೆ. ಇದರ ಬಗ್ಗೆ ನಾನು ಹೆಚ್ಚು ವ್ಯಾಖ್ಯಾನ ಮಾಡಲು ಹೋಗುವುದಿಲ್ಲ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಕೆಲವು ಅತೃಪ್ತರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜತೆ ಸಂಪರ್ಕದಲ್ಲಿದ್ದಾರೆ. ಒಬ್ಬ ಮನುಷ್ಯ ಇನ್ನೊಬ್ಬರ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುತ್ತಾನೆ ಎಂಬ ಕಾರಣಕ್ಕಾಗಿ ಸಂಪರ್ಕ ಇಟ್ಟುಕೊಂಡಿರಬಹುದು ಎಂದರು.
ಬಿಜೆಪಿ ಸರ್ಕಾರದ 3ನೆ ಮುಖ್ಯಮಂತ್ರಿಯಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿನ್ನೆ ಅವರಿಗೆ ತವರು ನೆಲದಲ್ಲಿ ಉತ್ತಮ ಸ್ವಾಗತ ಸಿಕ್ಕಿದೆ. ಬಿಜೆಪಿಯವರು ನಂಜುಂಡಪ್ಪ ವರದಿ ಬಗ್ಗೆ ಹೆಚ್ಚು ಮಾತನಾಡಿದ್ದಾರೆ, ಪ್ರಸ್ತಾಪಿಸಿದ್ದಾರೆ. ಈಗ ಆ ಭಾಗದ ನಾಯಕರೆ ಮುಖ್ಯಮಂತ್ರಿ ಆಗಿರುವುದರಿಂದ ನಂಜುಂಡಪ್ಪ ವರದಿಯನ್ನು ಜಾರಿಗೆ ತಂದು ಪ್ರಾದೇಶಿಕ ಅಸಮಾನತೆಯನ್ನು ದೂರ ಮಾಡಬೇಕೆಂದು ಮನವಿ ಮಾಡಿದರು.
ಮುಂದಿನ ಸೆಪ್ಟೆಂಬರ್ ಒಳಗಾಗಿ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗ, ಮಹಿಳಾ ಮೋರ್ಚಾ ಸಮಾವೇಶಗಳನ್ನು ನಡೆಸುವ ಮೂಲಕ ಪಕ್ಷವನ್ನು ಸಜ್ಜುಗೊಳಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ. ಸಂಸದೀಯ ಮಂಡಳಿಯ ನಾಯಕರೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
Not in touch with any leader of BJP, Cong:Deve Gowda
Bangalore:JD(S) supremo and former prime minister HD Deve Gowda has said that none of the Congress or BJP leaders or legislators are in touch with him or have contacted him.
Related News
- ಚುನಾವಣೆಗೆ ಸ್ಪರ್ಧಿಸದಂತೆ ಭವಾನಿಗೆ ಫರ್ಮಾನು ಹೊರಡಿಸಿದ ಗೌಡ್ರು
- ನೀರು ನಿಲ್ಲಿಸಿರುವುದು ನ್ಯಾಯಾಂಗ ನಿಂದನೆಯಲ್ಲ
- ಕಾವೇರಿದ ವಿವಾದ: ಮಗನ ವಿರುದ್ಧವೇ ಕೆಂಡಾಮಂಡಲರಾದ ದೇವೇಗೌಡರು!
- ಕಾವೇರಿಗಾಗಿ ರಾಜಕೀಯ ಮರೆತ ದೇವೇಗೌಡರು!
- ದೇವೇಗೌಡರ ಕುಟುಂಬವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ
- ಸರ್ಕಾರ ರೈತರ ಸಂಕಷ್ಟಕ್ಕೆ ಧಾವಿಸಲಿ: ದೇವೇಗೌಡ
- ಅತೃಪ್ತ ಬಿಜೆಪಿ ಶಾಸಕರಿಗೆ ದೇವೇಗೌಡ ಬಹಿರಂಗ ಆಹ್ವಾನ
- ಸದಾನಂದರ ಬಲಿಪಶು: ದೇವೇಗೌಡ ಗರಂ
- ಬೆಂಗಳೂರು-ಮೈಸೂರು ಕಾರಿಡಾರ್ ರಸ್ತೆ ಅಡ್ಡಿಗೆ ದೇವೇಗೌಡರ ಜಮೀನು ಕಾರಣ
- ಜೆಡಿಎಸ್ ಅಣತಿಯಂತೆ ಸರ್ಕಾರ: ಮೌನ ಮುರಿದ ದೇವೇಗೌಡರು
- ದೇವೇಗೌಡರ ಆತ್ಮಶಾಂತಿಗೆ ಐದು ನಿಮಿಷ ಮೌನ ಪ್ರಾರ್ಥನೆ!
ಸ್ಪಾಟ್ ಫಿಕ್ಸಿಂಗ್: ಗುರುನಾಥ್ ಇಂದು ಕೋರ್ಟಿಗೆ
ಮುಂಬಯಿ: ಚೆನ್ನೈ ಸೂಪರ್ ಕಿಂಗ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೇಯಪ್ಪನ್ ನನ್ನು ಇಂದು ಮುಂಬಯಿ ಪೊಲೀಸರು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಒಂದುವರೆ ತಿಂಗಳಲ್ಲಿ ಸೌದಿಯಿಂದ 56,700 ಮಂದಿ ಭಾರತೀಯರ ಗಡಿಪಾರು
ಹೊಸದಿಲ್ಲಿ: ಸುಮಾರು 56,700 ಮಂದಿ ಭಾರತೀಯರನ್ನು ಸೌದಿ ಅರೇಬಿಯಾ ಮುಂದಿನ ಒಂದುವರೆ ತಿಂಗಳಲ್ಲಿ ಗಡಿಪಾರು ಮಾಡಲಿದೆ ಮತ್ತು ಇವರೆಲ್ಲರಿಗೆ ಎಮರ್ಜೆನ್ಸಿ ಸರ್ಟಿಫಿಕೇಟ್ ನೀಡಲು ಹತ್ತು ಅಧಿಕಾರಿಗಳನ್ನು ಸೌದಿಗೆ...
ಜನಸಂಖ್ಯೆಯಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ
ಬೆಂಗಳೂರು: ದೇಶದಲ್ಲಿ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ್ಕೆ 9ನೇ ಸ್ಥಾನದಲ್ಲಿದೆ. ಇದು 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 6,10,95,297 ಜನರಿದ್ದು, 2001ರ ಜನಗಣತಿಗೆ ಹೋಲಿಸಿದರೆ...
ಬೆಂಗಳೂರಿನ ಐಐಎಂ-ಬಿಗೆ ಹುಸಿ ಬಾಂಬ್ ಕರೆ
ಬೆಂಗಳೂರು: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೆಜ್ ಮೆಂಟ್ ಬೆಂಗಳೂರು(ಐಐಎಂ-ಬಿ) ಗೆ ಬಾಂಬ್ ಕರೆ ಬಂದಿದ್ದು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ಶೋಧಿಸಿದಾಗ ಇದು ಹುಸಿ ಕರೆಯೆಂದು ತಿಳಿದುಬಂದಿದೆ.
ಎಪಿಎಲ್ -ಬಿಪಿಎಲ್ ಕಾರ್ಡ್ ದಾರರೇ ಅಕ್ಕಿ ಸಿಗೋದು ಫುಲ್ ಡೌಟು!
ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ದಾರರೇ ಹುಷಾರ್..! ಮುಂದಿನ ತಿಂಗಳು ನಿಮಗೆ ಅಕ್ಕಿ ಸಿಗುವುದು ಬಹುತೇಕ ಅನುಮಾನ ಕಾರಣ ರಾಜ್ಯದ ಗೋದಾಮಿನಲ್ಲಿ ಇರುವ ಅಕ್ಕಿಗೆ ನುಸಿಬಾಧೆ ತಗುಲಿದ್ದು..
ಮಂಗಳೂರು ಮೂಲದ ಬಾಲಕನಿಗೆ ನ್ಯಾಶನಲ್ ಜಿಯೋಗ್ರಾಫಿಕ್ ಬೀ ಪ್ರಶಸ್ತಿ
ವಾಷಿಂಗ್ಟನ್: ಮಂಗಳೂರು ಮೂಲದ ಬಾಲಕನೊಬ್ಬ ಅಮೆರಿಕಾದಲ್ಲಿ ನಡೆದ ನ್ಯಾಶನಲ್ ಜಿಯೋಗ್ರಾಪಿಕ್ ಬೀ 2013 ಸ್ಪರ್ಧೆಯನ್ನು ಗೆದ್ದುಕೊಂಡಿದ್ದಾನೆ. ಏಶ್ಯಾದ ಬೆಟ್ಟ ಪ್ರದೇಶ ಬೊತ್ಸವಾನಾದಲ್ಲಿರುವ ಹುಲಿಗಳ ಬಗ್ಗೆ ಮತ್ತು ಇಂಗ್ಲೆಂಡ್ ನ...
ಮಾಸಾಂತ್ಯಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ!
ಬೆಂಗಳೂರು: ಮೇ ತಿಂಗಳ ಕೊನೆಯ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಪುಟ್ಟಣ್ಣ ಹೇಳಿದ್ದಾರೆ.
ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷದಿಂದ ಬಂಗಾಳಿ ದ್ವಿತೀಯ ಭಾಷೆ
ಬೆಂಗಳೂರು: ಕರ್ನಾಟಕದಲ್ಲಿ ಬಂಗಾಳಿ ಭಾಷೆಯನ್ನು ಈ ಶೈಕ್ಷಣಿಕ ವರ್ಷದಿಂದ ದ್ವಿತೀಯ ಭಾಷೆಯನ್ನಾಗಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಬಂಗಾಳಿ ಸಮುದಾಯದವರು ದೀರ್ಘ ಸಮಯದಿಂದ ಈ ಬಗ್ಗೆ ಮನವಿ...
ಅನಂತಮೂರ್ತಿ ಹಿಂದಿಕ್ಕಿ ಬೂಕರ್ ಪಡೆದ ಅಮೆರಿಕಾದ ಲೇಖಕಿ
ಲಂಡನ್: ಕರ್ನಾಟಕದ ಸಾಹಿತಿ ಯು. ಆರ್. ಅನಂತಮೂರ್ತಿ ಅವರು 2013ರ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯಿಂದ ಕೂದಲೆಳೆಯ ಅಂತರದಲ್ಲಿ ವಂಚಿತರಾಗಿದ್ದಾರೆ. ಅನಂತಮೂರ್ತಿ ಅವರನ್ನು ಹಿಂದಿಕ್ಕಿದ ಅಮೆರಿಕಾದ ಲೇಖಕಿ ಲೈಡಿಯಾ
ಬಿಸಿಸಿಐ ಅಧ್ಯಕ್ಷನ ಅಳಿಯನೂ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿ?
ಮುಂಬಯಿ: ಸ್ಪಾಟ್ ಫಿಕ್ಸಿಂಗ್ ನ ನೀರು ಬಿಸಿಸಿಐ ಕಾಲಬುಡಕ್ಕೆ ಬಂದಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುನಾಥ್ ಮೆಯಪ್ಪನ್ ಅವರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಫನೀಶ್ ಮೂರ್ತಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಕೋರ್ಟ್ ಹೊರಗಡೆ ಇತ್ಯರ್ಥ
ಹೊಸದಿಲ್ಲಿ: ಸಹ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಎದುರಿಸುತ್ತಿರುವ ಐಗೇಟ್ ನ ಮಾಜಿ ಸಿಇಒ ಫನೀಶ್ ಮೂರ್ತಿ ತನ್ನ ಮೇಲಿನ ಪ್ರಕರಣವನ್ನು ಕೋರ್ಟ್ ನ ಹೊರಗಡೆಯೇ ಬಗೆಹರಿಸುವ
ಸಂಜಯ್ ದತ್ ಪುಣೆಯ ಯೆರವಾಡ ಜೈಲಿಗೆ
ಮುಂಬಯಿ: 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್ ನಟ ಸಂಜಯ್ ದತ್ ನ್ನು ಪುಣೆಯ ಯೆರವಾಡ ಜೈಲಿಗೆ ಸ್ಥಳಾಂತರಿಸಲಾಗಿದೆ. ಮೇ 16ರಂದು ದತ್ ವಿಶೇಷ ಟಾಡಾ ಕೋರ್ಟ್ ಮುಂದೆ ಶರಣಾಗಿದ್ದರು.
ಚೆನ್ನೈ ಪೊಲೀಸರ ದಾಳಿ: 6 ಮಂದಿ ಬುಕ್ಕಿಗಳ ಸೆರೆ
ಚೆನ್ನೈ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ನ ಮೂರು ಮಂದಿ ಆಟಗಾರರು ಸಿಕ್ಕಿಬಿದ್ದ ಮರುದಿನ ಚೆನ್ನೈ ಪೊಲೀಸರು 10 ಕಡೆಗಳಲ್ಲಿ ದಾಳಿ ಮಾಡಿ 6 ಮಂದಿ ಬುಕ್ಕಿಗಳನ್ನು ಬಂಧಿಸಿದ್ದಾರೆ.
ದೆಹಲಿಯಲ್ಲಿ ವೈದ್ಯನಿಂದ ರೋಗಿಯ ಅತ್ಯಾಚಾರ
ಹೊಸದಿಲ್ಲಿ: ದೆಹಲಿಯ ಸರ್ಕಾರಿ ಆಸ್ಪತ್ರೆಯ 51ರ ಹರೆಯದ ವೈದ್ಯ ತನ್ನ ಕ್ಲಿನಿಕ್ ನಲ್ಲಿ 21ರ ಹರೆಯದ ರೋಗಿಯೊಬ್ಬಳನ್ನು ಅತ್ಯಾಚಾರ ಮಾಡಿದ ಪ್ರಕರಣ ನಡೆದಿದೆ. ದೆಹಲಿಯ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಯಲ್ಲಿ
ದೆಹಲಿಯಲ್ಲಿ 12ನೇ ತರಗತಿ ಬಾಲಕಿಯ ಗುಂಡಿಕ್ಕಿ ಹತ್ಯೆ
ಹೊಸದಿಲ್ಲಿ: ದಕ್ಷಿಣ ದೆಹಲಿಯಲ್ಲಿ 12ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹುಡುಗನೊಬ್ಬ ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಮುನಿಕ್ರಾ ಪ್ರದೇಶದ ಬುಧ ವಿಹಾರ್ ಪ್ರದೇಶದಲ್ಲಿರುವ
ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬಯಿ: ಮಹಾರಾಷ್ಟ್ರದ ಬಿಜೆಪಿಯ ಎಂಎಲ್ ಸಿ ಮಧು ಚೌವಾಣ್ ತನ್ನ ಪಕ್ಷದ ಮಾಜಿ ಕಾರ್ಯಕರ್ತೆಯನ್ನು ಅತ್ಯಾಚಾರ ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ.
ಮಧು ಚೌವಾಣ್ ವಿರುದ್ಧ ಮುಂಬಯಿ ಪೊಲೀಸರು
ಹಲ್ಲೆಗೊಳಗಾಗಿದ್ದ ಪಾಕ್ ಕೈದಿ ಸಾವು
ಚಂಡೀಗಡ: ಜಮ್ಮು ಜೈಲಿನಲ್ಲಿ ಕಳೆದ ವಾರ ಸಹ ಕೈದಿಗಳಿಂದ ಹಲ್ಲೆಗೊಳಗಾಗಿದ್ದ ಪಾಕಿಸ್ತಾನದ ಕೈದಿ ಸಾನುಲ್ಲಾ ರಂಜಾಯ್ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ.
ಹತ್ಯೆ ಪ್ರಕರಣ: ತಲ್ವಾರ್ ದಂಪತಿ ಹೇಳಿಕೆ ದಾಖಲಿಸಲು ಕೋರ್ಟ್ ಆದೇಶ
ಘಜಿಯಾಬಾದ್: ಆರುಷಿ-ಹೇಮರಾಜ್ ಹತ್ಯಾ ಪ್ರಕರಣದಲ್ಲಿ ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯವು ರಾಜೇಶ್ ಮತ್ತು ನುಪುರ್ ತಲ್ವಾರ್ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ.
ಅತ್ಯಾಚಾರ ಪ್ರಕರಣ: ವೈದ್ಯಕೀಯ ವಿದ್ಯಾರ್ಥಿನಿ ದೇಹದ ಮೇಲಿತ್ತು ಕಚ್ಚಿದ ಗುರುತು!
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಇಬ್ಬರು ಕಚ್ಚಿದ ಗುರುತುಗಳಿದ್ದವು ಎಂದು ಹೇಳಲಾಗಿದೆ. ಈ ಎರಡು ಗುರುತುಗಳು
ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ, ಕಚೇರಿಗೆ ಐಟಿ ದಾಳಿ
ಮುಂಬಯಿ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಮಂಗಳವಾರ ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮನೆ ಹಾಗೂ ಕಚೇರಿಗೆ ದಾಳಿ ಮಾಡಿದ್ದಾರೆ. ಕಿರುತೆರೆಯಲ್ಲಿ ತನ್ನ ಧಾರಾವಾಹಿಗಳಿಂದ ಹೆಚ್ಚಿನ ಪ್ರಚಾರವನ್ನು ಪಡೆದುಕೊಂಡಿರುವ
ಬಿಗ್ ಬಾಸ್ ನ ವಿನಾಯಕ್ ಜೋಶಿ ಜತೆ ನಮ್ ಸ್ಟೈಲ್ ನ ಮಾತುಕತೆ...
ವಿನಾಯಕ್ ಜೋಶಿ, ಒಂದ್ ಟೈಮ್ ನಲ್ಲಿ ಈ ಹೆಸರು ಕೇಳಿದಾಕ್ಷಣ ತಕ್ಷಣ ನೆನಪಿಗೆ ಬರ್ತಿದ್ದದ್ದು ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ ಚಿತ್ರದ ಗುಂಡು ಗುಂಡಾಗಿ, ಮುದ್ದು ಮುದ್ದಾಗಿದ್ದ ಪುಟ್ಟ ಬಾಲಕ.
ಆತ ರಕ್ಷಿಸಿದ ಮಗು ಬದುಕುಳಿಯಲಿಲ್ಲವೆಂದು ಬಿಕ್ಕಿಬಿಕ್ಕಿ ಅತ್ತಿದ್ದ...!
ದೇಶದ ಇತಿಹಾಸದಲ್ಲಿಯೇ ಭೀಕರ ದುರಂತವಾದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂದಿಗೆ(ಮೇ 22) ಮೂರು ವರ್ಷಗಳು ತುಂಬುತ್ತಿದೆ. 2010ರ ಮೇ 22 ರಂದು ಬೆಳಗ್ಗೆ 6.05ರ...
ಮಾಯಾಲೋಕದ ಅಪೂರ್ವ ಬಾಲೆ...!
ಹ್ಯಾಟ್ ತಲೆಗೇರಿಸಿ, ಕೈಯಲ್ಲೊಂದು ಮಂತ್ರದಂಡ ಹಿಡಿದುಕೊಂಡು ಸ್ಟೇಜ್ ಏರಿದಳೆಂದರೆ ಎದುರು ಕುಳಿತವರು ಕಣ್ ಕಣ್ ಬಿಟ್ಟು ನೋಡುತ್ತಲೇ ಇರಬೇಕೆನ್ನುವ ಮಯಾ ಲೋಕವೇ ಸೃಷ್ಟಿಯಾಗಿಬಿಡುತ್ತದೆ. ಈ ಮಾಯಾಲೋಕದ...
ಚೊಚ್ಚಲ ಚಿತ್ರದಲ್ಲೇ ಕೇಳುಗರ ಮೋಡಿ ಮಾಡಿದ ಸಂಗೀತ ನಿರ್ದೇಶಕ ವಿಜೇತ್
ಕಳೆದ ಸಂಚಿಕೆಯಲ್ಲಿ ಸರ್ಜಾ ಕುಟುಂಬದಿಂದ ಚಿತ್ರರಂಗಕ್ಕೆ ನಟನಾಗಿ ಪ್ರವೇಶ ಮಾಡ್ತಾ ಇರೋ ಭರತ್ ಸರ್ಜಾ ರವರ ಬಗ್ಗೆ ಪರಿಚಯ ಮಾಡಿಸಲಾಯ್ತು. ಈ ಬಾರಿ ಸರ್ಜಾ ಕುಟುಂಬದ ಮತ್ತೊಬ್ಬನ ಪರಿಚಯ. ಆತ ಚಿತ್ರರಂಗವನ್ನು ಕಾಲಿಟ್ಟಿರುವುದು...
ಪ್ರಯೋಗ ಶೀಲ ಕಲಾವಿದನ ಕಲ್ಪನೆಯಲ್ಲಿ ಮೂಡಿದ ಕಾಗದ ಭಿತ್ತಿ ಶಿಲ್ಪಗಳು
ಆಧುನಿಕತೆ ಬೆಳೆದಂತೆಲ್ಲ ಕಲೆಯು ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲಿದೆ. ಪ್ರಸುತ್ತ ಸಂದರ್ಭದಲ್ಲಿ ಕಲಾವಿದ ತನ್ನದೇ ಆದ ಮಾಧ್ಯಮದಿಂದ ಕಲಾಕೃತಿಗಳನ್ನು ರಚಿಸುತ್ತ ತನ್ನ ಕಲ್ಪನೆಯನ್ನು ಅಭಿವ್ಯಕ್ತಿಸಲು ವಿಭಿನ್ನ ಮಾರ್ಗವನ್ನು ಕಂಡುಕೊಳ್ಳುತ್ತಿದ್ದಾನೆ.
ಮ್ಯಾಜಿಕ್ ಕಲೆಯ ಸಾಗರ ಈ ಸಾಗರ್...!
ಮ್ಯಾಜಿಕ್ ನೊಂದಿಗೆ ಕೆಲವು ಅಪಾಯಕಾರಿ ಸ್ಟಂಟ್ ಗಳನ್ನು ಮಾಡುವ ಸಾಗರ್ ಗೆ ಮನೆಯೇ ಮೊದಲ ಪ್ರಯೋಗ ಶಾಲೆ. ಚಾಪರ್ ಬ್ಲೇಡ್ ನ ಹರಿತವಾದ ಭಾಗದ ಮೇಲೆ ನಡೆದಾಡುವ ಸಾಗರ್, ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡುವುದಲ್ಲದೆ...
ಶಿಕ್ಷಣ ವ್ಯವಸ್ಥೆಗೇ ಸವಾಲೆಸೆಯುತ್ತಿರುವ ಸ್ವರೂಪ
ಚಿತ್ರಕಲೆ ಮೂಲಕ ಸಾಧಾರಣಾ ವಿದ್ಯಾರ್ಥಿಯೊಬ್ಬ ಹೆಚ್ಚಿನ ಅಂಕ ಪಡೆಯಲು ಸಾಧ್ಯವೇ? ದಡ್ಡನೆಂದು ಬೈದು ಶಾಲೆಯಿಂದ ಹೊರದಬ್ಬಲ್ಪಟ್ಟ ವಿದ್ಯಾರ್ಥಿ ಕೇವಲ 20 ದಿನಗಳ ತರಬೇತಿಯ ಮೂಲಕ ಡಿಸ್ಟಿಂಕ್ಷನ್ ಪಡೆಯಲು ಸಾಧ್ಯವೇ? ಡ್ಯಾನ್ಸ್ ಮಾಡಿ ಗಣಿತ-ವಿಜ್ಞಾನದಲ್ಲಿ...ವಿಶೇಷ
ಕುಟುಂಬವೆಂಬ ವಟವೃಕ್ಷದ ಕೆಳಗೆ...
ಮೇ 15 ವಿಶ್ವ ಅಂತರರಾಷ್ಟ್ರೀಯ ಕುಟುಂಬ ದಿನ, ಸತ್ಸಂಪ್ರದಾಯದಲ್ಲಿ ವಿಶ್ವಕ್ಕೆ ಮಾದರಿಯಾದ ಭಾರತದ ಕುಟುಂಬ ಪದ್ಧತಿಯಲ್ಲಿ ಆತಂಕಕಾರಿಯಲ್ಲದಿದ್ದರೂ ಅಲ್ಪಪ್ರಮಾಣದ ಪಾಶ್ಚಾತ್ಯರ ಅನುಕರಣೆಯಾಗುತ್ತಿರುವುದು ಅಸಹನೀಯವೇ.
ಇತಿಹಾಸದ ಕಥೆ ಹೇಳುತ್ತಿದೆ ಮಡಿಕೇರಿ ಅರಮನೆ
ಕೊಡಗಿನ ಮುಖ್ಯ ಪಟ್ಟಣ ಮಡಿಕೇರಿಗೆ ಆಗಮಿಸುವ ಪ್ರವಾಸಿಗರನ್ನು ಎತ್ತರದ ಸಮತಟ್ಟಾದ ಸ್ಥಳದಲ್ಲಿ ಕಲ್ಲುಕೋಟೆ ನಡುವೆ ನೆಲೆನಿಂತ ಅರಮನೆ ಗಮನಸೆಳೆಯುತ್ತದೆ. ಈ ಅರಮನೆ ಮೈಸೂರು ಅರಮನೆಯಂತೆ ವಿಶ್ವವಿಖ್ಯಾತಿ ಪಡೆಯದಿರಬಹುದು.
ಸ್ತ್ರೀಯರ ಮಹತ್ವದ ದಿನ ಅಕ್ಷಯ ತೃತೀಯಾ....
ಅಕ್ಷಯ ತದಿಗೆ ಸ್ತ್ರೀಯರಿಗೆ ಮಹತ್ವದ್ದಾಗಿದೆ. ಸ್ತ್ರೀಯರು ಚೈತ್ರದಲ್ಲಿ ಕೂರಿಸಿದ ಚೈತ್ರ ಗೌರಿಯನ್ನು ಈ ದಿನ ವಿಸರ್ಜನೆ ಮಾಡುತ್ತಾರೆ. ಇದರ ಪ್ರಯುಕ್ತ ಅರಿಶಿನ-ಕುಂಕುಮ ನೀಡುವ ಕಾರ್ಯಕ್ರಮವನ್ನೂ ಮಾಡುತ್ತಾರೆ.

Write Your Comment Here...