ಆರೋಗ್ಯ ಕ್ಷೇತ್ರದಲ್ಲಿ ಖಾಸಗಿಯವರು ಕೈಜೋಡಿಸಬೇಕು: ರಮಣ ರೆಡ್ಡಿ
[Updated 08/08/2012 09:56 am]ಬೆಂಗಳೂರು: ಸಾರ್ವತ್ರಿಕ ಹಾಗೂ ಸಮಗ್ರ ಆರೋಗ್ಯ ರಕ್ಷಣೆ ನೀಡಲು ಖಾಸಗಿ ಕ್ಷೇತ್ರ ಸಾರ್ವಜನಿಕ ಕ್ಷೇತ್ರದೊಂದಿಗೆ ಕೈಜೋಡಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ ತಿಳಿಸಿದ್ದಾರೆ.
ನವೀನ ಹಾಗೂ ದೀರ್ಘ ಸ್ವರೂಪದ ಆರೋಗ್ಯ ರಕ್ಷಣೆ ಕುರಿತಂತೆ ಬೆಂಗಳೂರಿನಲ್ಲಿ ಏರ್ಪಟ್ಟ ಸಮಾವೇಶದಲ್ಲಿ ಅವರು ಈ ವಿಷಯ ತಿಳಿಸಿದರು.
ಆರೋಗ್ಯ ರಕ್ಷಣೆಗೆ ದುಡ್ಡಿನ ಕೊರತೆ ಇಲ್ಲ, ಆದರೆ, ಮಾನವ ಸಂಪನ್ಮೂಲದ ಕೊರತೆಯಿಂದ ಉತ್ತಮ ಚಿಕಿತ್ಸೆ ಒದಗಿಸಲು ಸಾಧ್ಯವಾಗುತ್ತಿಲ್ಲ, ಆದ ಕಾರಣ ಖಾಸಗಿಯವರು ರಾಜ್ಯದ ಒಳಭಾಗಗಳಲ್ಲಿ ಜನಸಾಮಾನ್ಯರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಲು ಮುಂದಾಗಬೇಕೆಂದು ಕರೆ ನೀಡಿದರು.
ಇತ್ತೀಚೆಗೆ 600 ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಕರೆದಿದ್ದೆವು. ಸಣ್ಣನಗರಗಳಲ್ಲಿರುವ ಖಾಲಿ ಹುದ್ದೆಗಳನ್ನು ತುಂಬಲು ಕರೆದ ಈ ಆಹ್ವಾನಕ್ಕೆ ಕೇವಲ 252 ಅರ್ಜಿಗಳು ಬಂದಿದ್ದು, ಇದರಲ್ಲಿ 137 ಮಂದಿ ಮಾತ್ರ ಸಂದರ್ಶನಕ್ಕೆ ಹಾಜರಾದರು. ಕೇವಲ 65 ವೈದ್ಯರು ಮಾತ್ರ ನಮ್ಮ ಆಹ್ವಾನ ಸ್ವೀಕರಿಸಿದರು ಎಂದು ರಮಣ ರೆಡ್ಡಿ ಹೇಳಿದರು.
ಜೂ.23ರಿಂದ ಪುಟ್ಟೇನಹಳ್ಳಿಯಲ್ಲಿ ನಳಂದ ಕಪ್ ಟೆನ್ನಿಸ್
ಮೈಸೂರು: ಮೈಸೂರು ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಮತ್ತು ನಳಂದ ಗುರುಕುಲದ ಸಂಯುಕ್ತಾಶ್ರಯದಲ್ಲಿ ಪಿರಿಯಾಪಟ್ಟಣ ತಾಲೂಕಿನ ಪುಟ್ಟೇನಹಳ್ಳಿಯ ನಳಂದ ಗುರುಕುಲ ಅಂತರರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ...
ಸಿಎಂ ಬಾಗಿನ ಅರ್ಪಿಸುತ್ತಾರಾ?
ಬೆಂಗಳೂರು: ಕಾವರಿ ಕಣಿವೆಯಲ್ಲಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್, ಕಬಿನಿ, ಹೇಮಾವತಿ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಹೆಚ್ಚಿದೆ. ಸಾಮಾನ್ಯವಾಗಿ ಆಷಾಡದ ಆರಂಭಕ್ಕೂ ಮುನ್ನವೇ ಜಲಾಶಯಗಳಿಗೆ
ಸಿಎಂ ಸಿದ್ದು ಮುನ್ನಡೆಯುವುದು ಅನುಮಾನ: ಡಿವಿಎಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತರಾತುರಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದನ್ನು ಗಮನಿಸಿದರೆ ಅವರು ಹೆಚ್ಚು ದಿನ ಆಡಳಿತ ನಡೆಸುವುದು ಅನುಮಾನ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಹೇಳಿದರು.
ವಿವಿ ಸಿಂಡಿಕೇಟ್ ಸದಸ್ಯರ ವಜಾಕ್ಕೆ ನಿರ್ಧಾರ?
ಬೆಂಗಳೂರು: ಬಿಜೆಪಿ ಸರಕಾರದಲ್ಲಿ ವಿಶ್ವವಿದ್ಯಾನಿಲಯಗಳಿಗೆ ನೇಮಕಗೊಂಡಿದ್ದ ಸಿಂಡಿಕೇಟ್ ಸದಸ್ಯರನ್ನು ನೂತನ ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ಮುಂದಾಗಿದೆ. ಆ ಮೂಲಕ ವಿವಿಯಲ್ಲೂ ಕೈ ಪಕ್ಷ ತನ್ನ ಪ್ರಾಬಲ್ಯ
ಮರಳು ಮಾಫಿಯಾ ತಡೆಗೆ ಕ್ರಮ: ಮಹದೇವಪ್ಪ
ಮೈಸೂರು: ರಾಜ್ಯದಾದ್ಯಂತ ಬೃಹದಾಕಾರವಾಗಿ ಬೆಳೆದ ಮರಳು ಮಾಫಿಯಾಕ್ಕೆ ಅಂಕುಶ ಹಾಕಲು ಪರಿಣಾಮಕಾರಿ ನೀತಿಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಸಂಪುಟ ಉಪಸಮಿತಿಯನ್ನು ರಚಿಸಲಾಗುವುದು
ಜುಲೈ 12ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಚೊಚ್ಚಲ ಬಜೆಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 12ರಂದು ಮಂಡಿಸಲಿದ್ದಾರೆ. ಈ ಸಂಬಂಧ ನಾಳೆಯಿಂದ ಜೂ.24ರವರೆಗೆ ಬಜೆಟ್ ಗೆ ಸಂಬಂಧಿಸಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ...
ಮತದಾರನಿಗೆ ಚಿಪ್ಪು ಕೊಟ್ಟ ಅಭ್ಯರ್ಥಿ
ಮೈಸೂರು: ಚುನಾವಣೆ ಸಂದರ್ಭದಲ್ಲಿ ಆಯೋಗ ಅದೆಷ್ಟೇ ಕಟ್ಟುನಿಟ್ಟಿನ ಕ್ರಮ ಜರುಗಿಸಿದರೂ, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಮಾತ್ರ ಮತದಾರರಿಗೆ ಆಮಿಷ ಒಡ್ಡುವುದನ್ನು ತಪ್ಪಿಸಲಾಗದು.
ಸಿಟಿ ಬಸ್ ಚಾಲಕನ ಮೇಲೆ ಖಾಕಿ ದೌರ್ಜನ್ಯ
ಮೈಸೂರು: ಪೊಲೀಸ್ ವಸತಿಗ್ರೃಹದ ಬಳಿ ನಗರಸಾರಿಗೆ ಬಸ್ ಚಾಲಕ ಹಾರ್ನ್ ಮಾಡಿದ್ದರಿಂದ ಕುಪಿತಗೊಂಡ ಪೊಲೀಸ್ ಅಧಿಕಾರಿಯೊಬ್ಬರು ಚಾಲಕ ಹಾಗೂ ನಿರ್ವಾಹಕರಿಬ್ಬರನ್ನು ಕಾರಿನಲ್ಲಿ.....
ನಕ್ಸಲ್ ಸಮಸ್ಯೆ ಇತಿಶ್ರೀಗೆ ಸಭೆ
ಬೆಂಗಳೂರು: ನಕ್ಸಲ್ ಸಮಸ್ಯೆಗೊಂದು ಪರಿಹಾರ ಕಂಡುಹಿಡಿಯುವ ಸಮುವಾಗಿ ಜೂ. 18, 19 ರಂದು ಉಡುಪಿ ಮತ್ತು ಮಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಬಿ.ಎಲ್.ಶಂಕರ್ ಚಿತ್ರಕಲಾ ಪರಿಷತ್ ಅಧ್ಯಕ್ಷ
ಬೆಂಗಳೂರು : ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಡಾ.ಬಿ.ಎಲ್. ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಹಾರದ ಜೆಡಿಯು ಸರ್ಕಾರ ಭದ್ರ
ಪಟ್ನಾ: ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಬುಧವಾದ ವಿಶ್ವಾಸಮತ ಗೆದ್ದುಕೊಂಡಿದೆ. ಬಿಜೆಪಿ ವಿಶ್ವಾಸಮತ ಯಾಚನೆ ವಿರುದ್ಧ
ಕೊನೆಗೂ ಕೇರಳ ಸಿಎಂಗೆ ಕೈಗೆ ಮೊಬೈಲ್!
ತಿರುವನಂತಪುರಂ: ತುಂಬಾ ಸರಳ ಜೀವಿಯಾಗಿರುವ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂದಿ ಅವರು ಸದ್ಯದಲ್ಲೇ ಮೊಬೈಲ್ ಫೋನ್ ಖರೀದಿ ಮಾಡಲಿದ್ದಾರಂತೆ. ಚಾಂದಿ ಅವರ ಬಳಿಯಲ್ಲಿ ಸ್ವಂತ ಮೊಬೈಲ್ ಇಲ್ಲದಿದ್ದ ಕಾರಣ
ಬೆಳ್ಳಿತೆರೆಯಲ್ಲೂ ಮಿಂಚಲು ರೆಡಿ: ಅನುಶ್ರೀ
ಕನ್ನಡ ಚಿತ್ರರಂಗ ಮತ್ತು ಕಿರುತೆರೆಗೆ ಯಾವತ್ತೂ ಅವಿನಾಭಾವ ಸಂಬಂಧ. ಒಂದು ಕಡೆ ಕನ್ನಡ ಚಿತ್ರರಂಗ, ಕನ್ನಡ ಚಿತ್ರಗಳಿಗೆ ಪ್ರೇಕ್ಷಕರಿಲ್ಲ, ಚಿತ್ರಗಳು ಓಡುತ್ತಿಲ್ಲ ಎಂದು ಕೂಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಕಿರುತೆರೆ...
ಕೊಡಗಿನ ಮಳೆಗಾಲದ ಸುಂದರಿ ಡೇಲಿಯಾ
ಮುಂಗಾರು ಮಳೆ ಸುರಿದಾಗ ಮನೆಮುಂದಿನ ಹೂತೋಟದಲ್ಲಿ ಸುಪ್ತವಾಗಿದ್ದ ಡೆಲೀಯಾ ಗೆಡ್ಡೆಗಳು ಮೊಳಕೆಯೊಡೆದು ಗಿಡಗಳಾಗಿ ವಿವಿಧ ಆಕಾರ, ಬಣ್ಣಗಳಲ್ಲಿ ಗೊಂಚಲುಗೊಂಚಲಾಗಿ ಹೂಬಿಟ್ಟು ಕಂಗೊಳಿಸುತ್ತವೆ.

Write Your Comment Here...