ಉಪರಾಷ್ಟ್ರಪತಿಯಾಗಿ ಅನ್ಸಾರಿ ಪುನರಾಯ್ಕೆ
[Updated 07/08/2012 11:08 pm]
ಹೊಸದಿಲ್ಲಿ: ಹಮೀದ್ ಅನ್ಸಾರಿ ಅವರು ಎರಡನೇ ಅವಧಿಗೆ ದೇಶದ ಉಪರಾಷ್ಟ್ರಪತಿಯಾಗಿ ಪುನರಾಯ್ಕೆಯಾಗಿದ್ದಾರೆ. ಎನ್ಡಿಎ ಅಭ್ಯರ್ಥಿ ಜಸ್ವಂತ್ ಸಿಂಗ್ ಅವರ ಮುಂದೆ ಸೋಲುಂಡಿದ್ದಾರೆ.
ಚುನಾವಣಾಧಿಕಾರಿಯಾಗಿದ್ದ ಲೋಕಸಭಾ ಪ್ರಧಾನ ಕಾರ್ಯದರ್ಶಿ ಟಿ.ಕೆ ವಿಶ್ವನಾಥನ್ ಈ ವಿಷಯವನ್ನು ಮಂಗಳವಾರ ಸಂಜೆ ಸಂಸತ್ತಿನಲ್ಲಿ ಅಧಿಕೃತವಾಗಿ ಪ್ರಕಟಿಸಿದರು.
ಒಟ್ಟಾರೆ 728 ಮತಗಳ ಪೈಕಿ ಅನ್ಸಾರಿ ಅವರಿಗೆ 490 ಪ್ರಥಮ ಪ್ರಾಶಸ್ತ್ಯದ ಮತಗಳು ಬಿದ್ದಿವೆ. ಜಸ್ವಂತ್ ಸಿಂಗ್ ಅವರಿಗೆ 238 ಮತಗಳು ಬಿದ್ದಿವೆ.
787 ಸದಸ್ಯರು ಮತದಾನಕ್ಕೆ ಅರ್ಹತೆ ಪಡೆದಿದ್ದರು. ಅವರ ಪೈಕಿ 736 ಮಂದಿ ಮತ ಚಲಾಯಿಸಿದರು. ಎಂಟು ಮತಗಳು ಅಸಿಂಧುವಾಗಿವೆ.
ಅನ್ಸಾರಿ ಅವರ ಗೆಲುವಿಗೆ 365 ಮತಗಳು ಸಾಕಾಗಿದ್ದವು. ಹೀಗಾಗಿ ಅನ್ಸಾರಿ ಅವರು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ ಎಂದು ವಿಶ್ವನಾಥನ್ ತಿಳಿಸಿದರು.
ಕಾಂಗ್ರೆಸ್ ಹಾಗೂ ಇತರ ಹಲವು ಪಕ್ಷಗಳ ಬೆಂಬಲ ಪಡೆದಿದ್ದ ಅನ್ಸಾರಿಗೆ ಎಡಪಕ್ಷಗಳೂ ಬೆಂಬಲ ನೀಡಿದ್ದವು. ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ಪರವಾಗಿ ಎನ್ಡಿಎ ಮಿತ್ರಪಕ್ಷಗಳು ಮತ್ತು ಎಐಎಡಿಎಂಕೆ ಮತ ಚಲಾಯಿಸಿದವು.
Hamid Ansari elected as Vice President for 2nd term
New Delhi: UPA candidate Hamid Ansari was on Tuesday re-elected India s Vice President, defeating NDA nominee Jaswant Singh. Lok Sabha secretary general TK Vishwanathan, the returning officer for the poll, made the announcement about Ansari s re-election minutes after the counting ended on Tuesday evening at Parliament House.
ಉಗ್ರ ಸಂಘಟನೆಗೆ ಪಾಕ್ ಸರ್ಕಾರದ ಅನುದಾನ
ಲಾಹೋರ್: 2008ರ ಮುಂಬಯಿ ಸ್ಪೋಟದಲ್ಲಿ ಭಾಗಿಯಾಗಿರುವ ನಿಷೇಧಿತ ಲಷ್ಕರ್-ಎ-ತೊಯ್ಬಾದ ಅಂಗ ಸಂಸ್ಥೆಯಾಗಿರುವ ಜಮಾತ್ ಉದ್-ದವಾ(ಜೆಯುಡಿ)ಗೆ ಪಾಕಿಸ್ತಾನದ ಪಂಜಾಬ್ ಪ್ರಾಂತೀಯ ಸರ್ಕಾರವು
ಡಿಎಸ್ ಪಿ ಕಾರು ಅವಘಡಕ್ಕೆ ಪಾದಚಾರಿಗಳ ಸಹಿತ ಐವರು ಬಲಿ
ಪುಣೆ: ಸೋಮವಾರ ಸಂಜೆ ಉಪ ಪೊಲೀಸ್ ಆಯುಕ್ತರೊಬ್ಬರು ತನ್ನ ಕಾರಿನ ನಿಯಂತ್ರಣ ಕಳಕೊಂಡು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದು, ಈ ದುರ್ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಇನ್ನು ಫ್ಯಾನ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವಂತಿಲ್ಲ!
ಭೋಪಾಲ್: ಇತ್ತೀಚಿನ ದಿನಗಳಲ್ಲಿ ಸಣ್ಣ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಆತ್ಮಹತ್ಯೆಗೆ ಹೆಚ್ಚಾಗಿ ಬಳಸಿಕೊಳ್ಳುವುದು ಮನೆಯಲ್ಲಿರುವ ಫ್ಯಾನ್. ಇದನ್ನು ಆತ್ಮಹತ್ಯೆಗೆ
ಬಿಹಾರದ ಜೆಡಿಯು ಸರ್ಕಾರ ಭದ್ರ
ಪಟ್ನಾ: ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಬುಧವಾದ ವಿಶ್ವಾಸಮತ ಗೆದ್ದುಕೊಂಡಿದೆ. ಬಿಜೆಪಿ ವಿಶ್ವಾಸಮತ ಯಾಚನೆ ವಿರುದ್ಧ
ಬೆಳ್ಳಿತೆರೆಯಲ್ಲೂ ಮಿಂಚಲು ರೆಡಿ: ಅನುಶ್ರೀ
ಕನ್ನಡ ಚಿತ್ರರಂಗ ಮತ್ತು ಕಿರುತೆರೆಗೆ ಯಾವತ್ತೂ ಅವಿನಾಭಾವ ಸಂಬಂಧ. ಒಂದು ಕಡೆ ಕನ್ನಡ ಚಿತ್ರರಂಗ, ಕನ್ನಡ ಚಿತ್ರಗಳಿಗೆ ಪ್ರೇಕ್ಷಕರಿಲ್ಲ, ಚಿತ್ರಗಳು ಓಡುತ್ತಿಲ್ಲ ಎಂದು ಕೂಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಕಿರುತೆರೆ...
ಕೊಡಗಿನ ಮಳೆಗಾಲದ ಸುಂದರಿ ಡೇಲಿಯಾ
ಮುಂಗಾರು ಮಳೆ ಸುರಿದಾಗ ಮನೆಮುಂದಿನ ಹೂತೋಟದಲ್ಲಿ ಸುಪ್ತವಾಗಿದ್ದ ಡೆಲೀಯಾ ಗೆಡ್ಡೆಗಳು ಮೊಳಕೆಯೊಡೆದು ಗಿಡಗಳಾಗಿ ವಿವಿಧ ಆಕಾರ, ಬಣ್ಣಗಳಲ್ಲಿ ಗೊಂಚಲುಗೊಂಚಲಾಗಿ ಹೂಬಿಟ್ಟು ಕಂಗೊಳಿಸುತ್ತವೆ.

Write Your Comment Here...